11 ದಿನಗಳವರೆಗೆ ಗಣೇಶೋತ್ಸವ ಆಚರಣೆಗೆ ಅವಕಾಶ

ಧಾರವಾಡ ಜಿಲ್ಲೆಯಲ್ಲಿ ಶ್ರೀ ಗಣೇಶೋತ್ಸವ ವನ್ನು ಗರಿಷ್ಠ 11 ದಿನಗಳವರೆಗೆ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾದಿಕಾರಿ ನಿತೇಶ್ ಪಾಟೀಲ  ಅವರು ತಿಳಿಸಿದ್ದಾರೆ.

ಸೆ.5 ರಂದು ಹೊರಡಿಸಿದ್ದ ಮಾರ್ಗಸೂಚಿಗಳಲ್ಲಿ ಗರಿಷ್ಟ 5 ದಿನ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗಿತ್ತು.

ಪರಿಷ್ಕೃತ ಆದೇಶದಲ್ಲಿ ಈ ನಿಯಮ‌ ಸಡಿಲಿಸಿ ಜಿಲ್ಲೆಯಲ್ಲಿ ಈ ಹಿಂದೆ ಸಾಂಪ್ರದಾಯಿಕವಾಗಿ  11 ದಿನಗಳವರೆಗೆ ಗಣೇಶೋತ್ಸವ ಆಚರಿಸುತ್ತಿದ್ದವರಿಗೆ ಈ ಬಾರಿಯೂ ಗರಿಷ್ಟ 11 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗಿದೆ.

ಆಚರಣೆ ವೇಳೆ ಕೋವಿಡ್-19 ರ ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share this article!

Leave a Reply

Your email address will not be published. Required fields are marked *

error: Content is protected !!