ಡಿಸೆಂಬರ್ 26 ರಿಂದ ಧಾರವಾಡ ಜಿಲ್ಲೆಯಲ್ಲಿ ಜಾನುವಾರು ಸಂತೆ ನಿಷೇಧ

ಧಾರವಾಡ ಜಿಲ್ಲೆಯಲ್ಲಿ ಜಾನುವಾರು ಗಳಲ್ಲಿ ಚರ್ಮ ಗಂಟು ರೋಗ ಉಲ್ಬಣವಾಗಿರುವುದರಿಂದ ಈ ರೋಗ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾಕ್ರಮವಾಗಿ ಡಿಸೆಂಬರ್ 26, 2022 ರಿಂದ ಜನವರಿ 25, 2023 ವರೆಗೆ ಕೆಲವು ನಿರ್ಬಂಧ ಹೇರಲಾಗಿದೆ.

ಕರ್ನಾಟಕ ಪ್ರಾಣಿ ರೋಗ (ನಿಯಂತ್ರಣ ) ಕಾಯ್ದೆ 1961 ಮತ್ತು ಸಿಆರ್‍ಪಿಸಿ ಕಾಯ್ದೆ 1973 ಕಲಂ 144ರ ಮೇರೆಗೆ ಧಾರವಾಡ ಜಿಲ್ಲಾಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಈ ಆದೇಶವು ಸಾಮೂಹಿಕ ಜಾನುವಾರುಗಳು ಸೇರುವಂತಹ ಜಾನುವಾರು ಜಾತ್ರೆ, ಜಾನುವಾರು ಸಂತೆ ಮತ್ತು ಜಾನುವಾರು ಸಾಗಾಣಿಕೆಗೆ ಮಾತ್ರ ಅನ್ವಯ ಆಗುತ್ತದೆ.

ಇದನ್ನು ಹೊರತುಪಡಿಸಿ ಬೇರೆ ಯಾವ ಉದ್ದೇಶಕ್ಕೂ ಅನ್ವಯಿಸುವುದಿಲ್ಲ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!