ಹುಬ್ಬಳ್ಳಿ ಅಂಕೋಲಾ ರೈಲ್ವೆ ಯೋಜನೆ ಅನುಷ್ಠಾನ ಕುರಿತು ಕೇಂದ್ರ ತಂಡದ ಧಾರವಾಡ ಜಿಲ್ಲಾ ಪ್ರವಾಸ

ಹುಬ್ಬಳ್ಳಿ ಅಂಕೋಲಾ ರೈಲ್ವೆ ಯೋಜನೆ ಅನುಷ್ಠಾನ ಸಂಬಂಧ ಸ್ಥಳ ಪರಿಶೀಲನೆ ಮತ್ತು ವಿವಿಧ ಹಿತಾಸಕ್ತಿದಾರರೊಂದಿಗೆ ಚರ್ಚಿಸಲು ಕೇಂದ್ರ ಸರ್ಕಾರದ ಸಮಿತಿಯು ಸೆಪ್ಟೆಂಬರ್ 28 ರಿಂದ 29 ರವರೆಗೆ ಧಾರವಾಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದೆ.

ಸೆಪ್ಟೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಸಕ್ರ್ಯೂಟ್‍ಹೌಸ್‍ದಲ್ಲಿ ವಿವಿಧ ಹಿತಾಸಕ್ತಿದಾರರೊಂದಿಗೆ ಸಭೆ ಆಯೋಜಿಸಲಾಗಿದೆ.

ಆಸಕ್ತಿ ಹೊಂದಿರುವ ಸಂಘಟಣೆಗಳು, ವ್ಯಕ್ತಿಗಳು ಯೋಜನೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಸೆಪ್ಟೆಂಬರ್ 28 ರೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 29 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು.

ಲಿಖಿತ ಅಭಿಪ್ರಾಯವನ್ನು ಇ-ಮೇಲ್ deo.dharwad@gmail.com ಗೆ ಕಳುಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!