ವಿಶೇಷ ಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

ವಿಶ್ವ ವಿಕಲಚೇತನರ ದಿನಾಚರಣೆಯ ವಿಕಲ ಚೇತನರ ಹಕ್ಕುಗಳ ಅಭಿಯಾನ ಅಂಗವಾಗಿ ವಿಶೇಷ ಚೇತನರ ಸಮನ್ವಯ ವಿಶೇಷ ಗ್ರಾಮ ಸಭೆಯನ್ನು ಕಿರೇಸೂರ ಗ್ರಾಮದ ಪಂಚಾಯತ ಸಭಾ ಭವನದಲ್ಲಿ ನಡೆಸಲಾಯಿತು.

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆ, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತ ಕಿರೇಸೂರ ಇವುಗಳ ಸಹಯೋಗದಲ್ಲಿ ಸಭೆ ಏರ್ಪಡಿಸಲಾಗಿತ್ತು.

ಮಾಂತೇಶ ಕುರ್ತಕೋಟಿ ಅವರು ವಿಕಲಚೇತನರಿಗಿರುವ ಹಕ್ಕುಗಳು ಮತ್ತು ವಿವಿಧ ಇಲಾಖೆಗಳ ಯೋಜನೆಗಳ ಬಗ್ಗೆ ಸವಿವರವಾಗಿ ಮಾಹಿತಿ ಒದಗಿಸಿದರು.

ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಸವಿತಾ ಕಬ್ಬೇರ, ಗ್ರಾಮ ಪಂಚಾಯತ ಕಾರ್ಯದರ್ಶಿ ವಿ.ಜಿ. ಕಿತ್ತೂರ, ಕಲ್ಮೇಶ, ಉಪಾಧ್ಯಕ್ಷರು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ ಸಿಬ್ಬಂದಿ, ವಿಶೇಷಚೇತನರು, ಪಾಲಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ ಅಧ್ಯಕ್ಷ ಬಸನಗೌಡ ಕಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

Share this article!

Leave a Reply

Your email address will not be published. Required fields are marked *

error: Content is protected !!