ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ ಕೋಟೆ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 26 ರಂದು ಮಧ್ಯಾಹ್ನ 3.30 ಕ್ಕೆ ಹುಬ್ಬಳ್ಳಿ ರೈಲ್ವೆ ಪ್ರಾಧಿಕಾರದ ರೈಲ್ವೆ ಭವನದಲ್ಲಿ ಅಧಿಕಾರಗಳ ಜೊತೆ ಸಭೆ ನಡೆಸುವರು.
ಹುಬ್ಬಳ್ಳಿ ಹಾಗೂ ಇತರ ರೈಲ್ವೆ ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಚತಾ, ಪೌರ ಕಾರ್ಮಿಕರನ್ನು ಗುತ್ತಿಗೆದಾರರು ಕೆಲಸದಿಂದ ತೆಗೆದು ಹಾಕಿರುವ ಕುರಿತು ಸಭೆ ನಡೆಯಲಿದೆ.
ಸಭೆಗೂ ಮುನ್ನ ಮಧ್ಯಾಹ್ನ 3 ಗಂಟೆಗೆ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.